today,s spl news- ಸಿದ್ಧಾಪುರದ ಉತ್ತಮ ಕೆಲಸ & ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿ

ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿ 

ಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಉತ್ತಮ ಕೆಲಸ-

ಸಿದ್ದಾಪುರ
ಅಡಕೆ ಮರದಿಂದ ಬಿದ್ದು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಿಲವಳ್ಳಿಯ ಉಮೇಶ ನಾರಾಯಣ ಗೌಡ ಅವರಿಗೆ ತಾಲೂಕು ಗ್ರಾಮ ಒಕ್ಕಲಿಗರ ಯುವ ಬಳಗದವರು ದಾನಿಗಳಿಂದ ಸಂಗ್ರಹಿಸಿದ 40ಸಾವಿರ ರೂಗಳ ಚೆಕ್‍ನ್ನು ಮಂಗಳವಾರ ಬಳಗದ ಅಧ್ಯಕ್ಷ ವಿ.ಆರ್.ಗೌಡ ಹೇರೂರು ವಿತರಿಸಿದರು.
ಹಣ ಸಂಗ್ರಹಿಸಲು ಸಿದ್ದಾಪುರ ಎಂಜಿಸಿ ಕಾಲೇಜಿನ ವಿದ್ಯಾರ್ಥಿ ನಾಗರಾಜ ಗೌಡ ಹಲಸಿನಮನೆ,ನಯನಾ ಗೌಡ ಹಲಸಿನಮನೆ ಇವರು ಹೆಚ್ಚು ಮುತುವರ್ಜಿವಹಿಸಿದ್ದರು. ಮುಂದಿನ ದಿನದಲ್ಲಿ ಮತ್ತಷ್ಟು ಹಣ ಸಂಗ್ರಹಿಸಿ ಉಮೇಶ ಗೌಡ ಅವರ ಚಿಕಿತ್ಸೆಗೆ ಸಹಕರಿಸಲಾಗವುದು ಎಂದು ವಿ.ಆರ್.ಗೌಡ ಹೇಳಿದರು.ಬಳಗದ ಪದಾಧಿಕಾರಿಗಳಾದ ಜಗನ್ನಾಥ ಗೌಡ, ಪ್ರಸನ್ನ ಗೌಡ, ಸುರೇಶ ಗೌಡ, ಮಂಜುನಾಥ ಗೌಡ,ನಯನಾ ಗೌಡ,ನಾಗರಾಜ ಗೌಡ ಇತರರಿದ್ದರು.

ವಿವೇಕಾನಂದ ಜಯಂತಿ ಆಚರಣೆ-

ದಿ.12.01.21 ರ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಪುಷ್ಪನಮನವನ್ನು ಸಲ್ಲಿಸುವುದರ ಮೂಲಕ ರಾಷ್ತ್ರೀಯ ಯುವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆ.ಎಸ್.ಹೆಗಡೆರವರು ಸ್ವಾಮಿ ವಿವೇಕಾನಂದರಿಂದ ಪ್ರೇರಣೆ ಪಡೆದು ದೇಶದ ಉನ್ನತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಭಾರತವು ಯುವ ಶಕ್ತಿಯ ದೇಶವಾಗಿದ್ದು ಯುವಕರು ಪ್ರಯತ್ನಪಟ್ಟಲ್ಲಿ ದೇಶದ ದಿಕ್ಕನ್ನೆ ಬದಲಾಯಿಸಬಹುದೆಂದು ಅಭಿಪ್ರಾಯಪಟ್ಟರು

ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಹಾಜರಿದ್ದರು.

Farm laws: Govt conspiring to destroy farmers, says Rahul Gandhi in Tamil Nadu

ಮಧುರೈ: ಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸರ್ಕಾರ ರೈತರನ್ನು ನಾಶ ಮಾಡುವುದಕ್ಕಾಗಿ ಹೊಸ ಕೃಷಿ ಕಾನೂನುಗಳ ಮೂಲಕ ಪಿತೂರಿ ನಡೆಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಪಕ್ಷ ರೈತರ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.

https://imasdk.googleapis.com/js/core/bridge3.433.1_debug_en.html#goog_1037571697

ಪತ್ರಕರ್ತರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಕೃಷಿ ಕಾನೂನುಗಳ ಮೂಲಕ ತನ್ನ ಇಬ್ಬರು ಅಥವಾ ಮೂವರು ಸ್ನೇಹಿತರಿಗೆ ಲಾಭ ಮಾಡಿಕೊಡಲು ಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೇಂದ್ರ ಸರ್ಕಾರ ರೈತರನ್ನು ಕೇವಲ ನಿರ್ಲಕ್ಷಿಸುತ್ತಿಲ್ಲ, ಆದರೆ ನಾಶ ಮಾಡಲು ಯತ್ನಿಸುತ್ತಿದೆ, ನಿರ್ಲಕ್ಷ್ಯ ಮಾಡುವುದಕ್ಕೂ ನಾಶ ಮಾಡುವುದಕ್ಕೂ ವ್ಯತ್ಯಾಸವಿದೆ, ಕೇಂದ್ರ ಸರ್ಕಾರ ರೈತರದ್ದೆಲ್ಲವನ್ನೂ ಅವರ ಮೂವರು ಸ್ನೇಹಿತರಿಗೆ ನೀಡಲು ಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *